
ಐತಿಹಾಸಿಕ ಕುಂಭಮೇಳಕ್ಕೆ ತೆರಳುವ ಡಿ.ಕೆ ಶಿವಕುಮಾರ್…!

ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗರಾಜ್ ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭಮೇಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇದೇ ಫೆ. 9. ಹಾಗೂ 10 ರಂದು ಪಾಲ್ಗೊಳ್ಳಲಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಫೆ.9 ರ ಬೆಳಗ್ಗೆ ಪ್ರಯಾಗ್ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾಹ್ನ 1 ಗಂಟೆ ನಂತರ ಪ್ರಯಾಗ್ರಾಜ್ನಿಂದ ವಾಪಾಸ್ ಆಗಲಿದ್ದಾರೆ.
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ
ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಹಿಂದೆಯೇ ಡಿಕೆಶಿ ತಿಳಿಸಿದ್ದರು. ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಿದ್ದು, ಆಮಂತ್ರಣ ನೀಡಿದ್ದಾರೆ. ಹಾಗಾಗಿ ಕುಟುಂಬ ಸಮೇತರಾಗಿ ಭೇಟಿ ನೀಡುವುದಾಗಿ ಹೇಳಿದ್ದರು.