ಕಾರು ಹತ್ತುವಾಗ ಎಡವಿದ ಡಿಸಿಎಂ ಡಿಕೆಶಿ
ಬೆಂಗಳೂರು : ಮನೆಯ ಎದುರಿಗೆ ಕಾರು ಹತ್ತಲು ತೆರಳುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಡವಿದ್ದಾರೆ.
ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಕಾರಿನತ್ತ ತೆರಳುತ್ತಿದ್ದರು. ಈ ವೇಳೆ ಡಿಕೆಶಿ ನೆಲಕ್ಕೆ ಹಾಕಿದ್ದ ಸ್ಲ್ಯಾಬ್ ಮೇಲೆ ಕಾಲಿಟ್ಟಾಗ ಎಡವಿದ್ದಾರೆ. ಕೂಡಲೇ ಅಲ್ಲಿದ್ದ ಸಿಬ್ಬಂದಿ ಡಿಕೆಶಿ ಕೈ ಹಿಡಿದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ನೀರಾವರಿ ಮಂತ್ರಿಗಳ ಸಭೆಗೆ ಹೋಗುತ್ತಿದ್ದೇನೆ. ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೇಳಬೇಕಿದೆ.
ಹಲವು ಯೋಜನೆಗಳನ್ನು ತಯಾರು ಮಾಡಿ ಕಳಿಸಿಕೊಟ್ಟಿದೆ. ಈಗಾಗಲೇ ನಮ್ಮ ಆಂಧ್ರ, ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ ಎಂದು ತಿಳಿಸಿದರು. ಇದ


