Select Page

Advertisement

CRIME : ಯುವಕ ಕಿರುಕುಳ – ಹಸೆಮಣೆ ಏರಬೇಕಿದ್ದ ಯುವತಿ ಸ್ಮಶಾನಕ್ಕೆ

CRIME : ಯುವಕ ಕಿರುಕುಳ – ಹಸೆಮಣೆ ಏರಬೇಕಿದ್ದ ಯುವತಿ ಸ್ಮಶಾನಕ್ಕೆ

ಗದಗ : ಮದುವೆಯ ಸಂಭ್ರಮದಲ್ಲಿದ್ದ ಯುವತಿಯೊಬ್ಬಳಿಗೆ ಯುವಕನೋರ್ವ ಸದಾ ಕಿರುಕುಳ ನೀಡುತ್ತಿದ್ದ ಹಿನ್ನಲೆ ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ.

ಮೃತ ಯುವತಿಯನ್ನು ಗದಗ ತಾಲೂಕಿನ ಅಸುಂಡಿಯಲ್ಲಿ ಸಾಯಿರಾಬಾನು ನದಾಫ್ (29) ಎಂದು ಗುರುತಿಸಲಾಗಿದೆ. ನದಾಫ್ ಎಂಬ ಯುವತಿಗೆ ಮೇ. 8 ರಂದು ಮದುವೆ ನಿಗದಿಯಾಗಿತ್ತು. ಈ ವಿಚಾರ ಗೊತ್ತಿದ್ದರೂ ಕೂಡ ಅದೇ ಗ್ರಾಮದ ಮೈಲಾರಿ ಎಂಬಾತ ಕಿರುಕುಳ ನೀಡುತ್ತಿದ್ದ..

ನನಗೆ ಮದುವೆ ಫಿಕ್ಸ್ ಆಗಿದೆ ಎಂದು ಹೇಳಿದರೂ ಕೂಡ ಕೇಳದೆ ಸದಾ ಹಿಂಸೆ ನೀಡುತ್ತಿದ್ದ, ಮೈಲಾರಿಯ ಈ ನಡೆಯಿಂದ ಬೇಸತ್ತ ನದಾಫ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!