Select Page

Advertisement

ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿಗೆ ಭಾಜನರಾದ ಧಾರವಾಡ ಡಿಸಿ ದಿವ್ಯ ಪ್ರಭು

ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿಗೆ ಭಾಜನರಾದ ಧಾರವಾಡ ಡಿಸಿ ದಿವ್ಯ ಪ್ರಭು
Advertisement

ಧಾರವಾಡ : ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಮತ್ತು ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾಗಿ ಉತ್ತಮವಾದ ಜನಸ್ನೇಹಿ, ನಾಗರಿಕಸ್ನೇಹಿ ಆಡಳಿತ ನೀಡಿರುವ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ 2023-24 ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರಕಟವಾಗಿದೆ.

ಹಾಗೆಯೇ, ಧಾರವಾಡ ತಹಶಿಲ್ದಾರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ರಾಕೇಶ ತಂಗಡಗಿ ಅವರಿಗೆ 2023-24 ನೇ ಸಾಲಿಗೆ ವರ್ಷದ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ಪ್ರಕಟವಾಗಿದೆ.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮತ್ತು ಗ್ರಾಮ ಆಡಳಿತಾಧಿಕಾರಿ ರಾಕೇಶ ತಂಗಡಗಿ ಅವರು ಪ್ರಸಕ್ತ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿಗಳಾಗಿ ರಾಜ್ಯ ಸರಕಾರದಿಂದ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಬರುವ ಸೆಪ್ಟೆಂಬರ್ 27 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಂದಾಯ ಇಲಾಖೆ ಪ್ರಕಟಣೆ ತಿಳಿಸಿದೆ

Advertisement

Leave a reply

Your email address will not be published. Required fields are marked *

error: Content is protected !!