ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಸಿಇಎನ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್ ಗಡ್ಡೇಕರ್ ಅವರಿಗೆ ನಗದು ಬಹುಮಾನ ಘೋಷಣೆ ಮಾಡಿ ಡಿಜಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.

ಅಧಿವೇಶನ ಸಂದರ್ಭದಲ್ಲಿ ಸಾಲು, ಸಾಲು ಪ್ರತಿಭಟನೆಗಳ ಮಧ್ಯೆ ಜನರ ರಕ್ಷಣೆ ಪೊಲೀಸರ ಮಹತ್ವದ ಜವಾಬ್ದಾರಿ ಆಗಿತ್ತು. ಈ ಸಂದರ್ಭದಲ್ಲಿ ಕರ್ತವ್ಯ ನಿಷ್ಠೆ ಮೆರೆದ ಹಿನ್ನಲೆಯಲ್ಲಿ ಇನ್ಸ್ಪೆಕ್ಟರ್ ಗಡ್ಡೇಕರ್ ಅವರನ್ನು ಗುರುತಿಸಿ 10 ಸಾವಿರ ರು. ನಗದು ಬಹುಮಾನ ಘೋಷಣೆ ಮಾಡಲಾಗಿದೆ.