ಖಾನಾಪುರ : ನೇಣು ಬಿಗಿದುಕೊಂಡ ಯುವತಿಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದ ಶಿವಾಜಿನಗರದಲ್ಲಿ ನಡೆದಿದೆ.
ಮೃತ ಯುವತಿ ರೋಹಿಣಿ ರಾಮಚಂದ್ರ ಚೌಪಡೆ ( 23 ) ಯುವತಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.