ಗೃಹಲಕ್ಷ್ಮೀ ಹಣ ಬಿಡುಗಡೆ ; ಡಿಕೆಶಿ ಗುಡ್ ನ್ಯೂಸ್
ಬೆಂಗಳೂರು : ಗೃಹಲಕ್ಷ್ಮೀ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಮೂರು ತಿಂಗಳ ಹಣ ಒಮ್ಮೆಲೆ ಖಾತೆಗೆ ಜಮೆ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕೆಲವರಿಗೆ ಎರಡು ಮೂರು ತಿಂಗಳಿಂದ ಹಣ ಬಿಡುಗಡೆಯಾಗಿಲ್ಲ ಎಂದಿದ್ದಾರೆ. ಮೂರು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದರು.


