ರಾಯಬಾಗ : ಸ್ವ ಗ್ರಾಮದಲ್ಲಿ ಮೃತ ಯೋಧನ ಅಂತ್ಯಕ್ರಿಯೆ ; ಕಣ್ಣೀರಾದ ಕುಟುಂಬ – VIDEO
ಚಿಕ್ಕೋಡಿ : ಕಳೆದ 10 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಸಂತೋಷ್ ಯಳಗೂಡ (30) ಅನಾರೋಗ್ಯದಿಂದ ಮೃತಪಟ್ಟಿದ್ದು ಭುದವಾದ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಸಿದ್ದಾಪುರ ಗ್ರಾಮ ಸಂತೋಷ ಯಳಗೋಡ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಗತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ದೇಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ತೆರೆದ ವಾಹನದಲ್ಲಿ ಮೃತ ಯೋಧನ ಪಾರ್ಥೀವ ಶರೀರ ಮೆರವಣಿಗೆ ನಡೆಯಿತು. ರಸ್ತೆ ಬದಿಯಲ್ಲಿ ಗ್ರಾಮಸ್ಥರು ಶಾಲೆ ಮಕ್ಕಳಿಂದ ಹೂ ಹಾಕುವ ಮೂಲಕ ಯೋಧನಿಗೆ ನಮನ ಸಲ್ಲಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.


