Select Page

ಅಬ್ದುಲ್ ಕಲಾಂ ನಂತರ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು…!

ಅಬ್ದುಲ್ ಕಲಾಂ ನಂತರ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು…!

ಕಾರವಾರ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿ ಹೊಸ ದಾಖಲೆ ಬರೆದಿದ್ದಾರೆ.

ಕಾರವಾರದ ಐ.ಎನ್.ಎಸ್‌ ಕದಂಬ ನೌಕಾನೆಲೆ ಡಾಕ್‌ ನಿಂದ ಐ.ಎನ್‌.ಎಸ್‌ ವಾಗ್ಶಿರ್‌ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್‌ ಕಲಾಂ ನಂತರ ಸಬ್ ಮೇರಿನ್ ನಲ್ಲಿ ಪ್ರಯಾಣಿಸಿದ ಎರಡನೇ ರಾಷ್ಟಪತಿ ದ್ರೌಪದಿ ಮುರ್ಮು ಆಗಿದ್ದಾರೆ.

ಐಎನ್ಎಸ್ ವಾಘಶೀರ್ ಭಾರತೀಯ ನೌಕಾಪಡೆಗೆ ಸೇರಿದ ಆರನೇಯ ಕಲ್ವರಿ-ವರ್ಗದ ಜಲಾಂತರ್ಗಾಮಿ ನೌಕೆಯಾಗಿದೆ. ಇದು ದೇಶದ ಅತ್ಯಂತ ಸುಧಾರಿತ ಜಲಾಂತರ್ಗಾಮಿ ಆಗಿದ್ದು, ‘ಮೇಕ್ ಇನ್ ಇಂಡಿಯಾ’ದ ರಕ್ಷಣಾ ಉಪಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಷ್ಟ್ರಪತಿಗಳೊಂದಿಗೆ ನೌಕಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಮತ್ತಿತರರು ಉಪಸ್ಥಿತರಿದ್ದರು. ಆಳ ಸಮುದ್ರದಲ್ಲಿ ನೌಕಾಪಡೆಯು ಎದುರಿಸುವ ಸವಾಲುಗಳು ಮತ್ತು ಜಲಾಂತರ್ಗಾಮಿ ಕಾರ್ಯಾಚರಣೆಗಳ ಸಂಕೀರ್ಣತೆಯನ್ನು ಹತ್ತಿರದಿಂದ ವೀಕ್ಷಿಸಲು ಈ ಭೇಟಿ ಸಹಕಾರಿಯಾಯಿತು.

Advertisement

Leave a reply

Your email address will not be published. Required fields are marked *

error: Content is protected !!