Select Page

Advertisement

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಹಣದ ಆಮಿಷ ಒಡ್ಡಿದ್ದು ನಿಜ : ಶಾಸಕ ಶ್ರೀಮಂತ ಪಾಟೀಲ್

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಹಣದ ಆಮಿಷ ಒಡ್ಡಿದ್ದು ನಿಜ :  ಶಾಸಕ ಶ್ರೀಮಂತ ಪಾಟೀಲ್

ಚಿಕ್ಕೋಡಿ : ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ನನಗೆ ಎಷ್ಟು ಹಣ ಬೇಕೆಂದು ಕೇಳಿದ್ರು, ಆದರೆ ನಾನು ಉತ್ತಮ ಸ್ಥಾನಮಾನ ನೀಡುವಂತೆ ಹೇಳಿದ್ದೆ ಎಂದು ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಐನಾಪುರ ಗ್ರಾಮದಲ್ಲಿ ಮಾತನಾಡಿದ ಇವರು. ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಇಟ್ಟಿದ್ದು ನಿಜ ಆದರೆ ನಾನು ಯಾವುದೇ ಹಣ ತೆಗೆದುಕೊಳ್ಳದೆ, ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ. ಅದರಂತೆ ಅವರು ನನಗೆ ಸಚಿವ ಸ್ಥಾನ ನೀಡಿದ್ದರು. ಸದ್ಯ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ ಮುಂಬರುವ ದಿನದಲ್ಲಿ ಮತ್ತೆ ಸಚಿವ ಸ್ಥಾನ ಕೊಡುತ್ತಾರೆ ಎಂದು ಭರವಸೆ ಇದೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಹೇಳಿದರು.

ಈಗ ಸಚಿವ ಸ್ಥಾನ ಸಿಕ್ಕಿಲ್ಲ ಈ ವಿಚಾರದಲ್ಲಿ ಹಿರಿಯ ನಾಯಕರೊಟ್ಟಿಗೆ ಚರ್ಚೆ ಮಾಡಿದ್ದೇನೆ, ಹಾಗೂ ನನಗೆ ಸಚಿವ ಸ್ಥಾನ ನಿಡುವಂತೆ ಮರಾಠ ಸಮುದಾಯ ಕೂಡ ಒತ್ತಾಯ ಮಾಡುತ್ತಿದೆ. ವರಿಷ್ಠರು ಮುಂಬರುವ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Advertisement

Leave a reply

Your email address will not be published. Required fields are marked *

error: Content is protected !!