ಕಾಗವಾಡ ಗಂಡ್ಮಕ್ಳ ತಲೆ ಒಡೆದ ಮಹಾರಾಷ್ಟ್ರ ಮಹಿಳೆಯರು ; ಆಸ್ಪತ್ರೆಗೆ ದಾಖಲು, ಚಿಕಿತ್ಸೆ
ಕಾಗವಾಡ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ ಮೂವರು ಮಹಿಳೆಯರು ಇಬ್ಬರು ಪುರುಷರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಕಾಗವಾಡ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಅಂಬೇಡ್ಕರ್ ನಗರದ ಜಿತೇಂದ್ರ ಕಾಂಬಳೆ, ದೀಪಕ ಕಾಂಬಳೆ, ಇಬ್ಬರ ಮೇಲೆ ಮಹಾರಾಷ್ಟ್ರ ಮೂಲದ ಮಹಿಳೆಯರು ಇಟ್ಟಿಗೆ ಹಾಗೂ ಕಲ್ಲಿನಿಂದ ಮರಣಾಂತಿಕವಾಗಿ ಹಲ್ಲೆ ಮಾಡಿದ್ದು ಇಬ್ಬರು ರಕ್ತದ ಮಡುವಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲ್ಲೆ ವಿಚಾರವಾಗಿ ಕಾಗವಾಡ ಪೊಲೀಸರು ಕೇಸ್ ದಾಖಲಿಸಿಕೊಳ್ಳುವಲ್ಲಿ ವಿಳಂಬ ತೊರಿದ್ದಾರೆ ಎಂಬ ಆರೋಪ ಕೇಳಿಬಂದಿದೆ ಇಬ್ಬರು ಸದ್ಯ ಕಾಗವಾಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


