Select Page

Advertisement

ಖಾನಾಪುರ : ಮುಸ್ಲಿಂ ಯುವಕನ ಕೊಲೆ ಪ್ರಕರಣ, ಶ್ರೀರಾಮಸೇನಾ ಹಿಂದುಸ್ತಾನ್ ತಾಲೂಕು ಅಧ್ಯಕ್ಷ ಸೇರಿ 10 ಜನರ ಬಂಧನ

ಖಾನಾಪುರ : ಮುಸ್ಲಿಂ ಯುವಕನ ಕೊಲೆ ಪ್ರಕರಣ, ಶ್ರೀರಾಮಸೇನಾ ಹಿಂದುಸ್ತಾನ್ ತಾಲೂಕು ಅಧ್ಯಕ್ಷ ಸೇರಿ 10 ಜನರ ಬಂಧನ

ಖಾನಾಪುರ :  ತಾಲೂಕಿನ ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ. ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕು ಘಟಕದ ಅಧ್ಯಕ್ಷ ಹಾಗೂ ಯುವತಿಯ ತಂದೆ, ತಾಯಿ ಸೇರಿ ಒಟ್ಟು 10 ಆರೋಪಿಗಳ ಬಂಧನ ಮಾಡಲಾಗಿದೆ.

ಯುವತಿ ತಂದೆ ಈರಪ್ಪ ಕಂಬಾರ, ತಾಯಿ ಸುಶೀಲಾ ಕಂಬಾರ, ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ನಾಗಪ್ಪ ಮುತಗೇಕರ್, ಕುತಬುದ್ದೀನ್ ಬೇಪಾರಿ, ಪ್ರಲ್ಹಾದ್ ಸುಗತೆ, ಮಂಜುನಾಥ ಗೋಂದಳಿ, ಗಣಪತಿ ಸುಗತೆ,‌ಪ್ರಶಾಂತ ಪಾಟೀಲ್, ಪ್ರವೀಣ್ ಪೂಜೇರಿ, ಶ್ರೀಧರ್ ಡೋಣಿ ಸೇರಿ ಒಟ್ಟು 10 ಆರೋಪಿಗಳ ಬಂಧಿತ ಆರೋಪಿಗಳು.

ಸೆಪ್ಟೆಂಬರ್ 28ರಂದು ರೇಲ್ವೆ ಹಳಿ ಮೇಲೆ ಖಾನಾಪುರ ಬಳಿ ರೇಲ್ವೆ ಹಳಿ ಮೇಲೆ ಅರ್ಬಾಜ್ ಮುಲ್ಲಾ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ರೈಲ್ವೆ ಪೊಲೀಸ್ ರಿಂದ ಬೆಳಗಾವಿ ಪೊಲೀಸರಿಗೆ ವರ್ಗಾವಣೆಯಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಕೊಲೆ ಗೈದ ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!