
ದುರ್ಘಟನೆಯಲ್ಲಿ ಚಿಕ್ಕೋಡಿ ಕಂದಾಯ ಇಲಾಖೆ ನೌಕರ ಸಾವು

ಚನ್ನಮ್ಮನ ಕಿತ್ತೂರು : ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ಕೆಐಡಿಬಿ ಹತ್ತಿರ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತ ಪಟ್ಟಿದ್ದಾನೆ.
ಚಿಕ್ಕೋಡಿ ತಹಶೀಲ್ದಾರ್ ಕಚೇರಿ ನೌಕರ ಅಮಿತ್ ರಾವ್ ಶಿಂಧೆ (35) ಮೃತ ದುರ್ದೈವಿ. ಬೆಂಗಳೂರಿನಿಂದ ಸ್ಥಗ್ರಾಮ ಅಕ್ಕೋಳ ಗೆ ಹೋಗುತ್ತಿರುವ ವೇಳೆ ಮುಂಜಾನೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ತಕ್ಷಣ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಕೊನೆ ಉಸಿರು ಎಳೆದಿದ್ದಾನೆ.
ಕಾರಿನಲ್ಲಿ 4 ಜನರು ಸಂಚರಿಸುತ್ತಿದ್ದರು. ಅದರಲ್ಲಿ ಒರ್ವ ಮೃತ ಪಟ್ಟಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೋಲಿಸ್ ರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ ಪ್ರವೀಣ ಗಂಗೋಳ ಭೆಟ್ಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.