ಮೌಢ್ಯ ಮೆಟ್ಟಿನಿಂತ ಸಿಎಂ ಸಿದ್ದರಾಮಯ್ಯ ; ನಾಳೆ ಕಿತ್ತೂರು ಉತ್ಸವದಲ್ಲಿ ಭಾಗಿ
ಬೆಳಗಾವಿ : ಕಿತ್ತೂರು ಉತ್ಸವದಲ್ಲಿ ಸಿಎಂ ಭಾಗವಹಿಸಿದರೆ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಮೆಟ್ಟಿನಿಂತ ಸಿಎಂ ಸಿದ್ದರಾಮಯ್ಯ ಶುಕ್ರವಾರ ಕಿತ್ತೂರು ವಿಜಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂರು ದಿನಗಳವರೆಗೆ ನಡೆಯಲಿರುವ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಧಾರವಾಡದಿಂದ ರಸ್ತೆ ಮಾರ್ಗವಾಗಿ ಸಿಎಂ ಕಿತ್ತೂರು ಕೋಟೆಗೆ ಭೇಟಿ ನೀಡಲಿದ್ದಾರೆ.


