ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ಶಾಸಕ ಲಕ್ಷ್ಮಣ ಸವದಿ ಹಾಗೂ ಬೆಂಬಲಿಗರ ಹಲ್ಲೆ ಖಂಡಿಸಿ ಡಿಸಿಸಿ ಬ್ಯಾಂಕ್ ನೌಕರರು ಬೀದಿಗಿಳಿದ್ದಾರೆ.



ಶನಿವಾರ ಸಂಜೆ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿರುವ ನೌಕರರು, ಹಲ್ಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧೀಸಬೇಕು ಹಾಗೆಯೇ ಶಾಸಕ ಲಕ್ಷ್ಮಣ ಸವದಿ‌ ಅವರ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನ ತೆರವು ಮಾಡುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಬ್ಯಾಂಕ್ ನೌಕರರು. ಆರೋಪಿಗಳ ಬಂಧನ ಆಗುವವರೆಗೂ ನಾವು ಪ್ರತಿಭಟನೆ ಹಿಂದೆ ಪಡೆಯುವುದಿಲ್ಲ‌. ನಾಳೆ ಬೃಹತ್ ಹೋರಾಟದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.