Select Page

Advertisement

ಅಣ್ಣನ ನೆನಪಿನೊಂದಿಗೆ ಸಚಿವೆ ಹೆಬ್ಬಾಳಕರ್ ಗೆ ಚಿಕ್ಕಮಗಳೂರಿನಲ್ಲಿ ಭರ್ಜರಿ ಸ್ವಾಗತ

ಅಣ್ಣನ ನೆನಪಿನೊಂದಿಗೆ ಸಚಿವೆ ಹೆಬ್ಬಾಳಕರ್ ಗೆ ಚಿಕ್ಕಮಗಳೂರಿನಲ್ಲಿ ಭರ್ಜರಿ ಸ್ವಾಗತ

ಚಿಕ್ಕಮಗಳೂರು : ಶನಿವಾರ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಚಿಕ್ಕಮಗಳೂರು ನಗರಕ್ಕೆ ಶುಕ್ರವಾರ ಸಂಜೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಭರ್ಜರಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಕುವೆಂಪು ಅವರ ಕುರಿತು ಕೆ.ಪಿ‌ ಪೂರ್ಣಚಂದ್ರ ತೇಜಸ್ವಿ ಅವರು ಬರೆದ ಅಣ್ಣನ ನೆನಪು ಪುಸ್ತಕ ನೀಡಿ ಸ್ವಾಗತಿಸಲಾಯಿತು.

ನಗರ ಪ್ರವೇಶಿಸುತ್ತಿದ್ದಂತೆ ಶಾಸಕರಾದ ಎಚ್.ಡಿ. ತಮ್ಮಯ್ಯ ಹಾಗೂ ನಯನಾ ಮೋಟಮ್ಮ ಮತ್ತು ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು, ಅಧಿಕಾರಿಗಳು ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಇದಕ್ಕೂ ಮೊದಲು, ಜಿಲ್ಲಾ ಗಡಿ ಗ್ರಾಮ ಮಾಗಡಿಯಲ್ಲಿ ಸಹ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯನವರು ಸಚಿವರನ್ನು ಸ್ವಾಗತಿಸಿದರು.

ಈ ವೇಳೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ತಹಶಿಲ್ದಾರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!