ಬೆಳಗಾವಿ : ಯುವಕನ ಬರ್ಬರ ಹತ್ಯೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ಬೆಳಗಾವಿ : ಯುವಕನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಂಬಂಧಿಸಿದಂತೆ ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ ನನ್ನು ಮೂವರು ದುಷ್ಕರ್ಮಿಗಳು ಬೈಕ್ ಮೇಲೆ ಬಂದು ರಾಡ್ ನಿಂದ ಹೊರೆದು ಕೊಲೆ ಮಾಡಿದ್ದರು. ಸಧ್ಯ ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಇನ್ನೂ ಯುವಕನನ್ನು ಕೊಲೆ ಮಾಡಿರುವ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಶಿವಬಸವ ನಗರದ ಸ್ಪಂದನ ಆಸ್ಪತ್ರೆ ಬಳಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.
ಮೃತ ಯುವಕನ ಅಂತ್ಯಕ್ರಿಯೆ ನಡೆಸುವಂತೆ ಕಟುಂಬದವರಿಗೆ ಪೊಲೀಸ್ ಅಧಿಕಾರಿಗಳು ಮನವರಿಕೆ ಮಾಡು ಪ್ರಯತ್ನ ನಡೆಸಿದ್ದಾರೆ. ಇನ್ನೂ ಆರೋಪಿಗಳ ಪತ್ತೆಗೆ ಪೊಲೀಸ್ ಬಲೆ ಬೀಸಿದೆ.


