ನಾಡಹಬ್ಬ ದಸರಾ ಉದ್ಘಾಟನೆ
ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ತಾಯಿ ಚಾಮುಂಡೇಶ್ವರಿ ಗೆ ಪೂಜೆ ಸಲ್ಲಿಸಿದರು.
ದಸರಾ ಉದ್ಘಾಟಕ ಡಾ. ಹಂ.ಪ. ನಾಗರಾಜಯ್ಯ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಸಚಿವರಾದ ಹೆಚ್. ಕೆ .ಪಾಟೀಲ್ ಡಾ. ಹೆಚ್. ಸಿ . ಮಹದೇವಪ್ಪ, ಕೆ.ವೆಂಕಟೇಶ್ ಸೇರಿ ಹಲವಾರು ಸಚಿವರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.


