Select Page

ಅಥಣಿ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ; ಸುಟ್ಟು ಕರಕಲು

ಅಥಣಿ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ; ಸುಟ್ಟು ಕರಕಲು

ಅಥಣಿ : ಕಟಾವು ಮಾಡಿದ್ದ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಸಂಪೂರ್ಣವಾಗಿ ಸುಟ್ಟಿರುವ ಘಟನೆ ಅಥಣಿ ತಾಲೂಕಿನ‌ ನದಿ ಇಂಗಳಗಾಂವ ಗ್ರಾಮದಲ್ಲಿ ನಡೆದಿದೆ.

ಬುಧವಾರ ಸಂಜೆ ಹೊಲದಲ್ಲಿ ಕಬ್ಬು ತುಂಬುವ ಸಂದರ್ಭದಲ್ಲಿ ಅಚಾನಕ್ಕಾಗಿ ಬೆಂಕಿ ತಗುಲಿದ್ದು ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿದ್ದವರು ಬೆಂಕಿ ಆರಿಸಲು ಹರಸಾಹಸ ಪಟ್ಟರು ಸಾಧ್ಯವಾಗಿಲ್ಲ.‌

ಘಟನೆಯಿಂದ ಸುಮಾರು 6 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಲಾಗುತ್ತಿತ್ತು.

Advertisement

Leave a reply

Your email address will not be published. Required fields are marked *

error: Content is protected !!