Select Page

Advertisement

ಜನರ ಆಕ್ರೋಶಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ : ನೇಹಾ ಹಿರೇಮಠ್ ಕೊಲೆ ಪ್ರಕರಣ ಸಿಒಡಿ ತನಿಖೆಗೆ

ಜನರ ಆಕ್ರೋಶಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ : ನೇಹಾ ಹಿರೇಮಠ್ ಕೊಲೆ ಪ್ರಕರಣ ಸಿಒಡಿ ತನಿಖೆಗೆ

ಶಿವಮೊಗ್ಗ  : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಒಡಿ ತನಿಖೆ ಒಪ್ಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸುವ ಮೂಲಕ ಕೊನೆಗೂ ಜನರ ಒತ್ತಡಕ್ಕೆ ತಲೆಬಾಗಿದೆ.

ನೇಹಾ ಹಿರೇಮಠ ಹತ್ಯೆ ಖಂಡಿಸಿ ಕಳೆದ ಮೂರು ದಿನಗಳಿಂದ ಜನ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೆ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಯಾಗಿಸಬೇಕು ಎಂಬ ಆಕ್ರೋಶವೂ ಜೋರಾಗಿತ್ತು‌. ಈ ನಡುವೆ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳು ಜನರನ್ನು ಕೆರಳಿಸಿದ್ದವು.

ಈ ಕುರಿತು ಮಾಹಿತಿ‌ ನೀಡಿರುವ ಸಿಎಂ ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ  ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ  ವಿಚಾರಣೆ  ನಡೆಸಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಶಿವಮೊಗ್ಗ  ವಿಮಾನನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು.

Advertisement

Leave a reply

Your email address will not be published. Required fields are marked *

error: Content is protected !!