ಪಿಡಿಒ ಮೇಲೆ ಮಾರಣಾಂತಿಕ ಹಲ್ಲೆ..!
ಯರಗಟ್ಟಿ : ಅನಧಿಕೃತ ಉತಾರ್ ನೀಡದ ಕಾರಣಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ.
ಮಾಡಮಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಗೌಡ ಪಾಟೀಲ ಹಲ್ಲೆಗೊಳಗಾದ ಪಿಡಿಒ. ಅನಧಿಕೃತವಾಗಿ ಉತಾರ್ ನೀಡದ ಹಿನ್ನಲೆಯಲ್ಲಿ ಮೂವರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಪಿಡಿಒ ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


