ಭೀಕರ ರಸ್ತೆ ಅಪಘಾತದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಸಾವು
ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರತ ಪಿಎಸ್ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಬಳಿ ನಡೆದಿದೆ.
ನವಲಗುಂದ ಕುಮಾರಗೊಪ್ಪ ಗ್ರಾಮದ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ (40) ಮೃತ ದುರ್ದೈವಿ. ಮಲ್ಲಿಕಾರ್ಜುನ ಅವರು ಅಮೀನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪಿಎಸ್ಐ ಮಲ್ಲಿಕಾರ್ಜುನ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಿರೇಸೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಅಧಿಕಾರಿ ಸ್ಥಳದಲ್ಲೇ ಸಾವಣಪ್ಪಿದ್ದಾರೆ.


