
ಭರ್ಜರಿ ಗೆಲುವು ಸಾಧಿಸಿದ ಸಾಹುಕಾರ್ ಪುತ್ರ ರಾಹುಲ್ ಜಾರಕಿಹೊಳಿ…!

ಬೆಳಗಾವಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಚುನಾವಣಾ ಫಲಿತಾಂಶ ಬಂದಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಭರ್ಜರಿ ಜಯ ಸಾಧಿಸಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 1 ಲಕ್ಷ 20 ಸಾವಿರ ಮತಗಳ ಅಂತರದಿಂದ ಬೃಹತ್ ಅಂತರದ ಗೆಲುವು ಸಾಧಿಸಿದ್ದು, ಇವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ರಾಹುಲ್ ಜಾರಕಿಹೊಳಿ ಗೆಲುವಿನ ಹಿನ್ನಲೆಯಲ್ಲಿ ಗೋಕಾಕ್ ನಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.