ಶಾಸಕ ಕಾಗೆಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್ ; ಸರಕಾರದ ವಿರುದ್ಧ ಮಾತಾಡಿದ್ದೆ ಸಂಕಷ್ಟ
ಬೆಳಗಾವಿ : ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿದೆ.
ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದ ಶಾಸಕ ರಾಜು ಕಾಗೆ ಅವರನ್ನು ಕೈಬಿಟ್ಟು ಬೇರೆಯವರಿಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೆ 39 ನಿಗಮ ಮಂಡಳಿಗೆ ನೂತನ ಅಧ್ಯಕ್ಷರ ನೆಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಶಾಸಕ ರಾಜು ಕಾಗೆ ಅವರಿಂದ ತೆರವಾದ ಸ್ಥಾನಕ್ಕೆ ಅರುಣ್ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅನುದಾನ ಹಂಚಿಕೆ ಕುರಿತು ಕಾಂಗ್ರೆಸ್ ಸರಕಾರದ ವಿರುದ್ಧ ಪದೇ, ಪದೇ ಆಕ್ರೋಶ ಹೊರಹಾಕುತ್ತಿದ್ದ ಇವರಿಗೆ ಹೈಕಮಾಂಡ್ ಶಾಕ್ ನೀಡಿದೆ.


