ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಡಿ ಲೇಡಿ : ಸಂಕಷ್ಟದಲ್ಲಿ ರಮೇಶ್ ಜಾರಕಿಹೊಳಿ
ಬೆಂಗಳೂರು : ಅತ್ಯಾಚಾರ ಪ್ರಕರಣ ಸಂತ್ರಸ್ತೆ ಎಸ್ಐಟಿ ರಚನೆ ಪ್ರಶ್ನಿಸಿ ಸಧ್ಯ ಸುಪ್ರೀಂಕೋರ್ಟ್ ಮೆಟ್ಟಿಲೆರಿರುವ ಹಿನ್ನಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಈ ಕುರಿತಾಗಿ ಸಿಡಿ ಪ್ರಕರಣದ ಸಂತ್ರಸ್ತೆ ಶುಕ್ರವಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಅಲ್ಲಿ ಎಸ್ಐಟಿ ರಚನೆ, ತನಿಖೆಯ ವಿಧಾನ ಮತ್ತು ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ನಡೆದ ತನಿಖೆಯನ್ನು ಯುವತಿ ಪ್ರಶ್ನಿಸಿದ್ದಾಳೆ. ಎಸ್ಐಟಿ ರಚನೆಯೇ ಸರಿ ಇಲ್ಲ ಸರ್ಕಾರ ಸ್ವಯಂ ಪ್ರೇರಿತವಾಗಿ ರಚನೆ ಮಾಡಿಲ್ಲ, ಎಸ್ಐಟಿ ರಚನೆಯೇ ಸರಿ ಇಲ್ಲವೆಂದಾಗ ಅದರ ವರದಿಯನ್ನು ಕೋರ್ಟಿಗೆ ಸಲ್ಲಿಕೆ ಮಾಡಿ, ವಿಚಾರಣೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾಳೆ.
ಎಸ್ಐಟಿ ವರದಿಯ ಮೇಲೆ ನಮಗೆ ನಂಬಿಕೆ ಇಲ್ಲ, ಇಂತಹ ವರದಿಯನ್ನು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಇದಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾಳೆ. ಕೆಲ ದಿನಗಳ ಹಿಂದೆ ಹೈಕೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಿಡಿ ಪ್ರಕರಣದ ಅಂತಿಮ ವರದಿ ಸಲ್ಲಿಸುವಂತೆ ಎಸ್ಐಟಿಗೆ ಗ್ರೀನ್ ಸಿಗ್ನಲ್ ನೀಡಿತ್ತು. ಜೊತೆಗೆ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿತ್ತು. ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಕೊಟ್ಟಿದೆ. ಇದು ಸಮ್ಮತಿಯ ಸೆಕ್ಸ್ ಪ್ರಕರಣ, ಇಲ್ಲಿ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಇಲ್ಲಿ ಅತ್ಯಾಚಾರ ನಡೆದಿದೆ ಎಂಬ ಅಂಶ ಬೆಳಕಿಗೆ ಬಂದಿಲ್ಲ. ಎಂಬ ಕಾರಣ ಎಸ್ಐಟಿ ನೀಡಿದೆ.