ಕತ್ತಿ ಸಾಹುಕಾರ್ ಗೆ ಬಿಗ್ ರಿಲೀಫ್ ನೀಡಿದ ಕೋರ್ಟ್ ; ನಾಳೆಯೇ ಹುಕ್ಕೇರಿ ಚುನಾವಣೆ
ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಹುಕ್ಕೇರಿ ಡಿಸಿಸಿ ನಿರ್ದೇಶಕ ಸ್ಥಾನದ ಚುನಾವಣೆ ಮುಂದೂಡಿಕೆ ಪ್ರಕರಣ ಸುಖಾಂತ್ಯಗೊಂಡಿದ್ದು ನಾಳೆಯೇ ಚುನಾವಣೆ ನಡೆಯಲಿದೆ.
ಹೈಕೋರ್ಟ್ ಧಾರವಾಡ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್ ದ್ವಿ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ವೇಳೆ ಹುಕ್ಕೇರಿ ಚುನಾವಣೆ ಮುಂದೂಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.
ನಾಳೆ ಭಾನುವಾರ ಬೆಳಗಾವಿ ಡಿಸಿಸಿ ಬ್ಯಾಂಕಿನ ಹುಕ್ಕೇರಿ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಸಲು ಕೋರ್ಟ್ ಆದೇಶ ನೀಡಿದ್ದು ಕೊನೆಗೂ ಕತ್ತಿ ಸಾಹುಕಾರಗೆ ರಿಲೀಫ್ ಸಿಕ್ಕಂತಾಗಿದೆ.


