
Video – ಚಂದ್ರಶೇಖರ ಗುರೂಜಿ ಭೀಕರ ಹತ್ಯೆ ವೀಡಿಯೋ

ಹುಬ್ಬಳ್ಳಿ : ಖ್ಯಾತ ಜ್ಯೋತಿಷ್ಯತಜ್ಞ ಹಾಗೂ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾದ ವೀಡಿಯೋ.
ಹುಬ್ಬಳ್ಳಿಯಲ್ಲಿ ಹೋಟೆಲ್ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಡಾ.ಚಂದ್ರಶೇಖರ್ ಗುರೂಜಿ ಮೇಲೆ ದಾಳಿ ನಡೆಸಿದ. ಅನಾಮಿಕ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾರೆ.

ಮೃತದೇಹವನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಲಾಬೂರಾಮ್ ಭೇಟಿ ನೀಡಿದ್ದಾರೆ. ವ್ಯಾಪಾರದ ಬಗ್ಗೆ ಚರ್ಚಿಸಲು ಚಂದ್ರಶೇಖರ್ ಗುರೂಜಿ ಹುಬ್ಬಳ್ಳಿಗೆ ಬಂದಿದ್ದರು. ಕೊಲೆಗೆ ಕಾರಣ ಮತ್ತು ಆರೋಪಿಯ ಬಗ್ಗೆ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದರು. ನಂತರ ರಕ್ತಸ್ರಾವದಿಂದ ಮೃತಪಟ್ಟರು.