Select Page

ಪೊಲೀಸ್ ಭಾಷೆ ಖಂಡನೀಯ – ಸತೀಶ್ ಜಾರಕಿಹೊಳಿ

ಪೊಲೀಸ್ ಭಾಷೆ ಖಂಡನೀಯ – ಸತೀಶ್ ಜಾರಕಿಹೊಳಿ

ಬೆಳಗಾವಿ : ಕನ್ನಡ ಬಾವುಟ ಹಿಡಿದ ಯುವಕನ ಮೇಲೆ ಬೆಳಗಾವಿ ನಗರ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಯುವಕನ ಆರೋಪಕ್ಕೆ ಎಲ್ಲೆಡೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ಪೊಲೀಸರು ಬಳಸಿದ ಭಾಷೆ ಖಂಡನೀಯ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಮಾಡಿದ ಇವರು. ಯುವಕರ ವಿರುದ್ಧ ಪೊಲೀಸರು ಬಳಸಿದ ಭಾಷೆ ಖಂಡನೀಯ. ಅವರಿಗೆ ಸರಿಯಾದ ರೀತಿಯಲ್ಲಿ ಮನವರಿಕೆ ಮಾಡಿಕೊಡಬಹುದಿತ್ತು. ಸುಮ್ಮನೆ ಈ ವಿಚಾರ ಬೆಳಿಸಿಕೊಂಡಿರುವುದು ತಪ್ಪು. ಬೆಳಗಾವಿ ಬೆಳೆಯುತ್ತಿರುವ ನಗರ, ಇದಕ್ಕೆ ಕೆಟ್ಟ ಹೆಸರು ತರುವ ಕೆಲಸ‌ ಮಾಡಬಾರದು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇನ್ನೂ ಬಾವುಟ ವಿವಾದ ಕುರಿತು ಈವರೆಗೂ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬ ಪ್ರಶ್ನೆಗೆ ಉತ್ತಿರಿಸಿದ ಇವರು. ಸರ್ಕಾರಕ್ಕೆ ಆ ಶಕ್ತಿ ಇಲ್ಲ. ಇಲ್ಲಿನ ಶಾಸಕ, ಹಾಗೂ ಉಸ್ತುವಾರಿ ಸವಿವರಿಗೆ ಹೇಳುವ ಶಕ್ತಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯನ್ನು ಬೆಳೆಯಲು ಅವಕಾಶ ಕೊಡಬೇಕು. ಈ‌‌ ಹಿಂದೆಯೂ ಬೆಳಗಾವಿಯಲ್ಲಿ ಹಿಂದೂ,‌ ಮುಸ್ಲಿಂ ಗಲಾಟೆಯಾಗಿತ್ತು. ಈಗ ಅದು ತಣ್ಣಗಾಗಿದೆ. ಯಾವುದೊಂದು ವಿಷಯಕ್ಕೆ ದೊಡ್ಡದಾಗಿ ಮಾಡುವುದು ಸರಿಯಲ್ಲ. ಪೊಲೀಸರು ಸಂಯಮದಿಂದ ವರ್ತನೆ ಮಾಡಬೇಕು. ಹೋರಾಟಗಾರರ ಮನೆಗೆ ಬೆಂಕಿ ಹಚ್ಚುವುದಾಗಿ ಹೇಳುವುದು ಪೊಲೀಸರ ನಡೆ ಸರಿಯಿಲ್ಲ. ಬೇರೆ ರೀತಿಯಲ್ಲಿ ನಿರ್ವಹಣೆ ಮಾಡಬೇಕಿತ್ತು. ಸರಕಾರಕ್ಕೆ ಇಂಥ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳುವ ಅಥವಾ ಯಾವುದೇ ಪ್ರಕರಣದಲ್ಲಿ ಕ್ರಮ ಜರುಗಿಸುವ ಧಮ್ ಇಲ್ಲ. ಧಮ್ ಬಗ್ಗೆ ಮಾತನಾಡುತ್ತಾರೆ. ಇಲ್ಲಿ ಉಸ್ತುವಾರಿ ಸಚಿವರು, ಶಾಸಕರಿಗೆ ಸರಕಾರಕ್ಕೆ ಹೇಳುವ ಶಕ್ತಿ ಇಲ್ಲ. ಬೇರೆ ಬೇರೆ ವಿಷಯದಲ್ಲಿಯೂ ಸಾಭೀತಾಗಿದೆ. ಇದನ್ನು ಹೆಚ್ಚು ಮುಂದುವರೆಸದು ಸರಿಯಲ್ಲ. ಅಲ್ಲದೆ, ಪೊಲೀಸರು ಕನ್ನಡದ ಧ್ವಜದ ಬಗ್ಗೆ ಬಳಕೆ ಮಾಡಿರುವ ಪದ‌ ಸರಿಯಲ್ಲ. ಪೊಲೀಸರು ಕೂಡ ಒಂದೊಂದು ಸಾರಿ ರಾಂಗ್ ಸೈಡ್ ಹೊಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿಯವರು ರೌಡಿ ಶಿಟರ್ ಗಳನ್ನು ಪಕ್ಷಕ್ಕೆ ಸೇರ್ಪಡೆ‌ ಮಾಡಿಕೊಳ್ಳುತ್ತಿರುವುದು ಅದು ಅವರ ಪಕ್ಷದ ವಿಚಾರ ನಾವು ಅದನ್ನು ಹೇಳಕಾಗಲ್ಲ. ಅದರ ಬಗ್ಗೆ ಚರ್ಚೆ ಮಾಡಲು ಸಾಧ್ಯವಿಲ್ಲ ಎಂದರು.
ಮಾಜಿ ಸಚಿವ ಡಿ.ಬಿ.ಇನಾಮದಾರ ಅವರ ಭೇಟಿಯ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಬಿ.ಇನಾಮದಾರ ನಮ್ಮ ಪಕ್ಷದ ನಾಯಕರು,‌ಮಾಜಿ ಶಾಸಕರು ಪಕ್ಷ ಸಂಘಟನೆ ಸೇರಿದಂತೆ ಸಾಕಷ್ಟು ವಿಷಯದ ಬಗ್ಗೆ ಚರ್ಚೆ ಮಾಡಿದ್ದೇವು. ಅಲ್ಲದೆ, ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಸರ್ವೆದಲ್ಲಿ ಯಾರ ಹೆಸರು ಬರುತ್ತದೆಯೋ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತೇವೆ. ಬಾಬಾಸಾಹೇಬ ಪಾಟೀಲ ಬಂದರೆ ಅವರದ್ದು, ಡಿ.ಬಿ.ಇನಾಮದಾರ ಅವರುದ್ದು ಬಂದರೆ ಅವರಿಗೆ. ಈಗಾಗಲೇ ಬೆಳಗಾವಿಯ ಎಲ್ಲ ಕ್ಷೇತ್ರದಲ್ಲಿ ಸರ್ವೆ ನಡೆಸಲಾಗುತ್ತಿದೆ. ಎಐಸಿಸಿಯಿಂದ, ಕೆಪಿಸಿಸಿ, ಸಿಎಲ್ ಪಿ ಕಡೆಯಿಂದ ಪ್ರತಿ ಕ್ಷೇತ್ರದಲ್ಲಿ ಸುಮಾರು 10 ಜನ ಆಕಾಂಕ್ಷಿಗಳಿದ್ದಾರೆ ಎಂದು ಪ್ರತಿಕ್ರಿಯಿಸಿದರು.


ಸವದತ್ತಿ ಮತಕ್ಷೇತ್ರದಲ್ಲಿ ಎಚ್.ಎಂ.ರೇವಣ್ಣ ಟಿಕೆಟ್ ಗಾಗಿ ಅರ್ಜಿ ಹಾಕಿದ್ದು ಅವರಿಗಾಗಿಯೋ ಅಥವಾ ಸಿದ್ದರಾಮಯ್ಯನವರ ಸಲುವಾಗಿಯೋ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅರ್ಜಿ ಹಾಕಲು ಎಲ್ಲರಿಗೂ ಅವಕಾಶ ಇದೆ. ಸವದತ್ತಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕೆಂಬ ಉದ್ದೇಶ ಇದೆ‌ ಎಂದರು.

ಮಹಾರಾಷ್ಟ್ರದಲ್ಲಿರುವ ಜತ್, ಅಕ್ಕಲಕೋಟೆಯ ಜನ ಕರ್ನಾಟಕಕ್ಕೆ ಬರುವುದಗಾಗಿ ಹೇಳಿದ್ದಾರೆ. ಅವರು ಇಲ್ಲಿ ಬರೋಕೆ ಆಗಲ್ಲ. ನಾವು ಅಲ್ಲಿ ಬರೋಕೆ ಆಗಲ್ಲ. ಅದು ಕೇವಲ ಚರ್ಚೆಗೆ ಸಿಮೀತವಾಗುತ್ತದೆ. ಒಂದು ಬಾರಿ ವಿಭಜನೆಯಾದರೆ ಅಂತಿಮ‌ ಚರ್ಚೆ. ಈ ಭಾಗದ ಜನರಿಗೆ ಕುಡಿಯು ನೀರು ಕೊಡದೆ ಇರುವುದು ಮಹಾರಾಷ್ಟ್ರದ ರಾಜಕೀಯ ಗಿಮಿಕ್. ಸಚಿವರು ಬೆಳಗಾವಿ ಒಳಗೆ ಬರಲು ಪೊಲೀಸರು ಬಿಡುವುದಿಲ್ಲ. ಅವರನ್ನು ನಿಪ್ಪಾಣಿಯಲ್ಲಿಯೇ ತಡೆ ಹಿಡಿಯುತ್ತಾರೆ ಎಂದರು.

ಸಿದ್ದರಾಮ್ಯನವರ ಸ್ಪರ್ಧೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಅದರ ಬಗ್ಗೆ ಅಂತಿಮ‌ ನಿರ್ಧಾರ ಅವರೆ ತೆಗೆದುಕೊಳ್ಳುತ್ತಾರೆ ಎಂದರು.
ಪರಿಶಿಷ್ಟ ಸ್ವಾಮೀಜಿ ನೇತೃತ್ವದಲ್ಲಿ ದಲಿತ ಸಿಎಂ ಆಗಬೇಕೆಂಬ ಸಮಾವೇಶ ನಡೆಸುತ್ತಿದ್ದಾರೆ. ಅಹಿಂದ ಸಂಘಟನೆಯನ್ನು ಗಟ್ಟಿಗೊಳಿಸುವುದು ಬಿಜೆಪಿಗೆ ಸಂಬಂಧ ಇಲ್ಲ. ಜಾರಕಿಹೊಳಿ ಸಹೋದರರು ಅಹಿಂದ ಸಮಾವೇಶ ಮಾಡುತ್ತಿರುವ ಸುದ್ದಿಗಾರರ ಪ್ರಶ್ನೆಗೆ ನನಗೆ ಕರೆದಿಲ್ಲ. ಕರೆದರೆ ನೋಡುತ್ತೇನೆ ಎಂದರು.

ನಾನು ಯಮಕನಮರಡಿ‌ ಮತಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ನನ್ನ ಸೋಲಿಸಲು ಕಳೆದ ಮೂರು ವರ್ಷದಿಂದ ಬಿಜೆಪಿಯವರು ಐದಾರು ಜನರನ್ನು ಗುರಿ ಮಾಡಿದ್ದಾರೆ. ನಮಗೆ ಬಿಜೆಪಿಯಿಂದ ತೊಂದರೆ ಇಲ್ಲ. ಬಗಲ್ ಮೇ ದುಶ್ಮನ ಬಗ್ಗೆ ಕೊಂಚ ಆತಂಕ ಅಷ್ಟೆ ಎಂದರು.

Advertisement

Leave a reply

Your email address will not be published. Required fields are marked *