Video – ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ ಹೇಗಿತ್ತು ನೋಡಿ…!
ಅಥಣಿ : ದೇಶದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸಂಭ್ರಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಥಣಿ ಪಟ್ಟಣದಲ್ಲಿಯೂ ಕೂಡ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲಾಗಿದ್ದರೂ ಕೂಡ ದೇಶದಲ್ಲಿ ಮೋದಿ ಆಡಳಿತವೇ ಇರಬೇಕು ಎಂಬುದು ಬಿಜೆಪಿಯವರ ಮಹಾದಾಶೆ ಆಗಿತ್ತು. ಇತ್ತೀಚಿಗೆ ಬಂದ ಚುನಾವಣಾ ಫಲಿತಾಂಶದಲ್ಲಿ ಅಥಣಿ ಮತಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೂ,
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅತ್ಯಂತ ಸಂಭ್ರಮ ಸಡಗರದಿಂದ ವಿಜಯೋತ್ಸವ ಆಚರಿಸಿದರು. ಆದರೆ ಬಿಜೆಪಿ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಇದು ಮುಜುಗರ ಎನಿಸಿದರೂ ದೇಶದಲ್ಲಿ ಪ್ರಧಾನಿ ಮೋದಿ ಆಡಳಿತವನ್ನು ನಿರೀಕ್ಷಿಸುತ್ತಿದ್ದರು.
ಆ ದಿನ ಇಂದು ರವಿವಾರ ನಿಗದಿಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಯುವಕರು ಅತ್ಯಂತ ಉತ್ಸಾಹದಿಂದ ಡಾಲ್ಬಿ ಸೌಂಡ್ ವ್ಯವಸ್ಥೆ ಮಾಡುವ ಮೂಲಕ ಸಾಯಂಕಾಲ 5 ಗಂಟೆಗೆ ಛತ್ರಪತಿ ಶಿವಾಜಿ ವೃತ್ತದಲ್ಲಿ ಶಿವಾಜಿ ಮಹಾರಾಜರ ಪುತ್ತಳಗಿ ಪೂಜಿಸಲ್ಲಿಸಿ ವಿಜಯೋತ್ಸವವನ್ನು ಪ್ರಾರಂಭಿಸಿದರು.
ಕೈಯಲ್ಲಿ ಬಿಜೆಪಿ ಧ್ವಜ ಮತ್ತು ಕೇಸರಿ ಧ್ವಜಗಳನ್ನ ಹಿಡಿದುಕೊಂಡು ಆಗಮಿಸಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಟಾಕಿಗಳನ್ನಾಡಿಸುತ್ತಾ , ಗುಲಾಲ್ ಮತ್ತು ಕೇಸರಿ ಬಣ್ಣವನ್ನು ಪರಸ್ಪರ ಹಚ್ಚಿಕೊಳ್ಳುವ ಮೂಲಕ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.
ಡಾಲ್ಬಿ ಸೌಂಡದಲ್ಲಿ ಬಿಜೆಪಿ ಹಾಡುಗಳಿಗೆ ನೂರಾರು ಯುವಕರು ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿ ಕುಣಿಯುತ್ತಿದ್ದ ದೃಶ್ಯ ಕಂಡು ಬಂತು. ಈ ಭವ್ಯ ಮೆರವಣಿಗೆಯಲ್ಲಿ ಜೈ ಶ್ರೀ ರಾಮ್ ಹಾಗೂ ನರೇಂದ್ರ ಮೋದಿ ಪರವಾದ ಘೋಷಣೆಗಳು, ಗಲ್ಲಿ ಗಲ್ಲಿಯಲ್ಲಿ ಯಾರೇ ಇದ್ದರೂ ದಿಲ್ಲಿಯಲ್ಲಿ ನರೇಂದ್ರ ಮೋದಿನೇ ಆಡಳಿತ ಮಾಡಬೇಕು ಎನ್ನುವ ಘೋಷಣೆಗಳು ಕೇಳಿ ಬಂದವು.
ಛತ್ರಪತಿ ಶಿವಾಜಿ ವೃತ್ತದಿಂದ ಆರಂಭವಾದ ಮೆರವಣಿಗೆ, ವಿಶ್ವಗುರು ಬಸವೇಶ್ವರ ವೃತ್ತ, ಮಹತಪಸ್ವಿ ಮುರುಘೇಂದ್ರ ಶಿವಯೋಗಿಗಳ ವೃತ್ತ, ವೀರರಾಣಿ ಚೆನ್ನಮ್ಮ ವೃತ್ತ, ಮತ್ತು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಮೂಲಕ ಮುಖ್ಯ ಬೀದಿಯಲ್ಲಿ ಹಾಯ್ದು ಬುಧವಾರ ಪೇಟ್, ಹನುಮಾನ್ ಮಂದಿರ ಅಗಸಿ ಮೂಲಕ ಮತ್ತೆ ಬಸವೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು.
ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ ಹಾಗೂ ಪಿಎಸ್ಐ ಶಿವಾನಂದ ಕಾರಜೋಳ ಹಾಗೂ ಅವರ ಸಿಬ್ಬಂದಿ ಟ್ರಾಫಿಕ್ ಸಮಸ್ಯೆ ನಿಯಂತ್ರಣದ ಜೊತೆಗೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
ಈ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರಾದ ಉಮೇಶರಾವ ಬಂಟೋಡಕರ, ಪ್ರಭಾಕರ ಚವ್ಹಾಣ, ಅಜಿತ ಪವಾರ, ಸಂಪತ ಕುಮಾರ್ ಶೆಟ್ಟಿ, ಮುರುಗೇಶ ಕುಮಟಳ್ಳಿ, ಸಿದ್ದು ಮಾಳಿ, ಪುಟ್ಟು ಹಿರೇಮಠ, ಗಿರೀಶ ಬುಠಾಳಿ, ವಿನಯ್ ಗೌಡ ಪಾಟೀಲ ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.