Select Page

ಭಗತ್ ಸಿಂಗ್ ಫೌಂಡೇಶನ್ ವತಿಯಿಂದ ಫೆ. 26 ಕ್ಕೆ  ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆ

ಭಗತ್ ಸಿಂಗ್ ಫೌಂಡೇಶನ್ ವತಿಯಿಂದ ಫೆ. 26 ಕ್ಕೆ  ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆ

ಕಾಗವಾಡ : ಯುವಕರಿಗೆ ಶೈಕ್ಷಣಿಕ ಜ್ಞಾನದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಭಗತ್ ಸಿಂಗ್ ಫೌಂಡೇಶನ್ ವತಿಯಿಂದ ಫೆ. 16 ರಂದು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಶೇಖರ್ ಕಳೇಲ್ ಹೇಳಿದರು.

ಕಿರಣಗಿ ಗ್ರಾಮದಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಬರುವ ಫೆಬ್ರವರಿ 26 ರಂದು ಅಥಣಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಮಟ್ಟದ ಮುಕ್ತ ಲಿಖಿತ ಪರೀಕ್ಷೆ ಆಯೋಜಿಸಲಾಗಿದೆ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದರು.‌

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ, ಪ್ರಥಮ ಬಹುಮಾನ 25000, ದ್ವೀತಿಯ ಬಹುಮಾನ 15000, ಹಾಗೂ  ತೃತಿಯ ಬಹುಮಾನ 10000 ರೂ. ನೀಡಲಾಗುತ್ತಿದ್ದು, 20 ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ನೀಡಲಾಗುವುದು.ಈ ಕುರಿತು ಹೆಚ್ಚಿನ‌ ಮಾಹಿತಿಗಾಗಿ 8495832015 ಸಂಖ್ಯೆ ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಸಂತೋಷ್ ಕಳೇಲ್, ಶ್ರೀಧರ್ ಶೆಟ್ಟಿ, ಸುನಿಲ್ ದೇಸಾಯಿ, ರಾಜು ಹಬಗೊಂಡಿ, ಅಪ್ಪಾಸಾಹೇಬ್ ಕಳೇಲ್, ಗಪೂರ್ ಸನದಿ, ಸಚಿನ್ ಜಬಗೊಂಡರ್, ಅಭಿಷೇಕ್ ಚೌಗುಲಾ, ಸಂಘದ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!