ಬೆಳಗಾವಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ಹುಟ್ಟುಹಬ್ಬದ ನಿಮಿತ್ತವಾಗಿ ಹಾಡಿನ ಮೂಲಕ ಶುಭಾಶಯ ತಿಳಿಸಲಾಗಿದೆ.

ಹೌದು ದಾವಣಗೆರೆಯಲ್ಲಿ ಇದೇ ಆಗಸ್ಟ್‌ 3 ರಂದು ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಗೀತ ರಚನೆ ಮಾಡಲಾಗಿದೆ. ಖ್ಯಾತ ಜನಪದ ಗಾಯಕ ಶಬ್ಬೀರ್ ಡಾಂಗೆ ಹಾಡು ಹಾಡಿದ್ದು ಸಧ್ಯ ಎಲ್ಲೆಡೆ ವೈರಲ್ ಆಗಿದೆ.

ಒಟ್ಟಿನಲ್ಲಿ ಸಿದ್ದರಾಮೋತ್ಸವಕ್ಕೆ ರಾಜ್ಯದ ಎಲ್ಲಾ ಅವರ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಶುಭಾಶಯ ತಿಳಿಸುವ ಮೂಲಕ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ.