ಡಿಸಿಸಿ ಅಖಾಡದಲ್ಲಿ ಇಬ್ಬರು ಮಾಜಿ ಶಾಸಕರು ; ದೊಡ್ಡಗೌಡ್ರ ವಿರುದ್ಧ ಡಾ. ವಿಶ್ವನಾಥ ಪಾಟೀಲ್ ಕಣಕ್ಕೆ
ಬೆಳಗಾವಿ : ಡಿಸಿಸಿ ಚುನಾವಣಾ ಕಣ ರಂಗೇರುತ್ತಿದ್ದು ಬೈಲಹೊಂಗಲ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಕಣಕ್ಕೆ ಇಳಿದಿದ್ದಾರೆ.
ಮಂಗಳವಾರ ಬೆಳಗಾವಿ ಡಿಸಿಸಿ ಕೇಂದ್ರ ಕಚೇರಿಯಲ್ಲಿ ಡಾ. ವಿಶ್ವನಾಥ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಿದ್ದು ಬೆಂಬಲ ನೀಡುವಂತೆ ಕೋರಿದ್ದಾರೆ. ಈ ಮೂಲಕ ಇಬ್ಬರು ಮಾಜಿ ಶಾಸಕರ ನಡುವೆ ಕದನ ಏರ್ಪಟ್ಟಿದೆ.
ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಿತ್ತೂರಿನ ಮಾಜಿ ಶಾಸಕ ಮಹಾಂತೇಶ್ ಡೊದ್ದಗೌಡರ ಸ್ಪರ್ಧೆ ಮಾಡುತ್ತಿದ್ದಾರೆ. ಇವರ ವಿರುದ್ಧ ಬೈಲಹೊಂಗಲದ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ್ ನಾಮಪತ್ರ ಸಲ್ಲಿಸಿದ್ದು ತೀವ್ರ ಕುತೂಹಲಕ್ಕೆ ಸಾಕ್ಷಿಯಾಗಿದೆ.


