Select Page

Advertisement

ವಿಟಿಯು ನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಆಯೋಜನೆ

ವಿಟಿಯು ನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಆಯೋಜನೆ
Advertisement

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪರಿಸರ ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕಾರ್ಯತಂತ್ರ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ.

ಫೆ. 13 ಹಾಗೂ 14 ರಂದು ಎರಡು ದಿನಗಳ‌ವರೆಗೆ ಅಂತರಾಷ್ಟ್ರೀಯ ಸಮ್ಮೇಳನವನ್ನು ವಿಟಿಯು ಸಿವಿಲ್ ಇಂಜಿನಿಯರಿಂಗ್ ವಿಭಾಗ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಸಮ್ಮೇಳನದ ಉದ್ಘಾಟನಾ ಸಮಾರಂಭ ಫೆ. 13 ಗುರುವಾರ ಬೆಳಿಗ್ಗೆ 10:30 ಕ್ಕೆ ನಡೆಯಲಿದ್ದು ರಷ್ಯನ್ ಅಕಾಡೆಮಿಯ ಪೆಟ್ರೊಜವೋಡ್ಸ್ಕ್ ವಾಟರ್ ಇನ್ಸ್ಟಿಟ್ಯೂಟ್ ನ ನಿರ್ದೇಶಕರಾದ ಡಾ. ಫಿಲಾಟೊವ್ ನಿಕೋಲೈ ನಿಕೊಲಾಯೆವಿಚ್ ಮುಖ್ಯ ಅತಿಥಿಗಳಾಗಿ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್ ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕೆನಡಾದ ಇನ್ ಲ್ಯಾಂಡ್ ವಾಟರ್ಸ್ ನ ಮಾಜಿ ಹಿರಿಯ ವಿಜ್ಞಾನಿ ಡಾ. ಸಿ ಆರ್. ಮೂರ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಡಾ. ಬಿ ಶಿವಲಿಂಗಯ್ಯ.

ವಿ ಟಿ ಯು ಕುಲಸಚಿವ ಪ್ರೊ ಬಿ ಈ ರಂಗಸ್ವಾಮಿ, ಮೌಲ್ಯಮಾಪನಾ ಕುಲಸಚಿವರಾದ ಪ್ರೊ. ಟಿ. ಎನ್. ಶ್ರೀನಿವಾಸ ಹಾಗೂ ಹಣಕಾಸು ಅಧಿಕಾರಿ ಡಾ. ಪ್ರಶಾಂತ ನಾಯಕ್ ಜಿ ಉಪಸ್ಥಿತರಿರುವರು.

ಎರಡು ದಿನಗಳು ನಡೆಯುವ ಈ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ವಿಷಯ ತಜ್ಞರು ಸೇರಿ ನೂರಕ್ಕಿಂತ ಹೆಚ್ಚು ತಜ್ಞರು, ಸಂಶೋಧನಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ ಎಂದು ವಿಟಿಯು ಪತ್ರಿಕಾ ಪ್ರಕಟಣೆ ಹೊರಡಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!