Breaking – ಯಡಿಯೂರಪ್ಪ ಬಂಧಿಸದಂತೆ ಹೈಕೋರ್ಟ್ ನಿರ್ಬಂಧ
ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಯಾವುದೇ ಕಾರಣಕ್ಕೂ ಬಂಧಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ಈ ಕುರಿತು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು. ಜೊತೆಗೆ ಸ್ಥಳೀಯ ಕೋರ್ಟ್ ಬಂಧನಕ್ಕೆ ವಾರೆಂಟ್ ಜಾರಿಮಾಡಿತ್ತು.
ಈ ಕುರಿತು ಯಡಿಯೂರಪ್ಪ ಪರ ವಕೀಲರು ಜಾಮೀನು ನೀಡುವಂತೆ ಹೈಕೋರ್ಟ್ ಮೊರೆ ಹೋಗಿತ್ತು. ವಾದ, ಪ್ರತಿವಾದ ಆಲಿಸಿದ ಕೋರ್ಟ್ ಯಡಿಯೂರಪ್ಪ ಅವರನ್ನು ಬಂಧನ ಮಾಡದಂತೆ ಹೇಳಿದ್ದು, ಎರಡು ವಾರದ ವರೆಗೆ ವಿಚಾರಣೆ ಮುಂದೂಡಿದೆ.
ಸಧ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಬಿದ್ದರೆ ಯಡಿಯೂರಪ್ಪ ಅವರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿಕೆ ನೀಡಿದ್ದಾರೆ.
ತಮ್ಮ ಸಮಸ್ಯೆ ಹೇಳಿಕೊಳ್ಳಲು ಯಡಿಯೂರಪ್ಪ ಮನೆಗೆ ಹೋದ ಸಂದರ್ಭದಲ್ಲಿ ಮಹಿಳೆಯ ಮಗಳಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 14 ರಂದು ದೂರು ದಾಖಲಿಸಿದ್ದರು. ಆದರೆ ಮಹಿಳೆ ಈ ಹಿಂದೆ ಇದೇ ರೀತಿಯಲ್ಲಿ ಸುಮಾರು 50 ಕ್ಕೂ ಅಧಿಕ ಜನರ ಮೇಲೆ ಪ್ರಕರಣದ ದಾಖಲಿಸಿದ್ದಾರೆ ಎಂಬುದು ತಿಳಿದುಬಂದಿತ್ತು.