ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಯುವಕ ಆತ್ಮಹತ್ಯೆ
ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ತಾಲೂಕಿನ ತೆಲಂಗಸರ ಸಮೀಪದ ಕಿರಗಾರಿಮನೆಯ ನಾಗರಾಜ ಗಾಂವ್ಕರ್ ( 35 ) ಆತ್ಮಹತ್ಯೆ ಮಾಡಿಕೊಂಡ ಯುವಕ.
ಪದವೀಧರ ಆಗಿದ್ದರು ಕೆಲಸ ಸಿಗದ ಕಾರಣ ಮನನೊಂದಿದ್ದ, ಹಾಗೆಯೆ ಕೃಷಿ ಮಾಡುತ್ತ ಜೀವನ ಸಾಗಿಸುತ್ತಿದ್ದ. ಆದರೆ ಇತ್ತ ಮದುವೆಯಾಗಲು ಹೆಣ್ಣು ಸಿಗದ ಹಿನ್ನಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


