ಯರಗಟ್ಟಿ : ಭೀಕರ ರಸ್ತೆ ಅಪಘಾತ, ವ್ಯಕ್ತಿ ಸಾವು
ಯರಗಟ್ಟಿ : ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬೂದಿಗೊಪ್ಪ ಕರೆಯಮ್ಮ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಬಸವರಾಜ ಫಕ್ಕೀರಪ್ಪ ಮಾದರ (41) ಮೃತ ವ್ಯಕ್ತಿ. ಯರಗಟ್ಟಿ ತಾಲೂಕಿನ ಬೂದಿಗೊಪ್ಪ ಕರೆಯಮ್ಮ ದೇವಸ್ಥಾನ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಯರಗಟ್ಟಿ ಪೊಲೀಸ್ ಠಾಣೆಯ ಎಎಸ್ಐ ವೈ. ಎಂ. ಕಡಕೋಳ ಬೇಟೆ ನೀಡಿ ಪರಿಶೀಲನೆ ನಡೆಸಿದ್ದಾರೆ.


