Select Page

Advertisement

BREAKING – ಭೀಕರ ರಸ್ತೆ ಅಪಘಾತ : ಲಾರಿ ಚಾಲಕ ಸ್ಥಳದಲ್ಲೇ ಸಾವು

BREAKING – ಭೀಕರ ರಸ್ತೆ ಅಪಘಾತ : ಲಾರಿ ಚಾಲಕ ಸ್ಥಳದಲ್ಲೇ ಸಾವು
Advertisement

ಯರಗಟ್ಟಿ : ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ಗೂಡ್ಸ್ ಲಾರಿ ಹಿಂಬದಿ ಹಗ್ಗ ಕಟ್ಟುತ್ತಿದ್ದ ಲಾರಿ ಚಾಲಕ, ರಾಮದುರ್ಗ ತಾಲೂಕಿನ‌ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸ್ಥಳದಲ್ಲೇ ಮೃತಪಟ್ಟ ಘಟನೆ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ.

ಯರಗಟ್ಟಿಯ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಬೆಳಗಾವಿಗೆ ಹೊರಟ್ಟಿದ್ದ ಕಾರು ವೇಗವಾಗಿ ಗುದ್ದಿದೆ. ಈ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನೂ ಕಾರಿನಲ್ಲಿದ್ದ ಅಮರೆಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ಗಾಯಗೊಂಡಿದ್ದು, ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲ ರಾಯಚೂರ ಜಿಲ್ಲೆಯ ಸಿಂಧನೂರು ಪಟ್ಟಣದವರಾಗಿದ್ದಾರೆ.

ಗಾಯಾಳುಗಳನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಯರಗಟ್ಟಿ ಪೊಲೀಸರು ಭೇಟಿ  ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!